ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 612ಅಂಕ: ಮರುಮೌಲ್ಯಮಾಪನದಲ್ಲಿ 619 ಅಂಕ..!: ಹೆಚ್ಚುವರಿ 7 ಅಂಕ ಪಡೆದ ವಿದ್ಯಾರ್ಥಿ ತಾಲೂಕಿಗೆ ದ್ವಿತೀಯ ಸ್ಥಾನಿ

ಬೆಳ್ತಂಗಡಿ: 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 612ಅಂಕ ಗಳಿಸಿದ್ದರು. ಆದರೆ ಇದರಿಂದ ಸಮಾಧಾನಗೊಳ್ಳದ ಇವರು ತಮ್ಮ ಉತ್ತರ ಪತ್ರಿಕೆಯನ್ನು ಮರುಮೌಲ್ಯಮಾಪನಕ್ಕೆ ಸಲ್ಲಸಿದ್ದರು. ಇದೀಗ 7 ಹೆಚ್ಚುವರಿ ಅಂಕ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಮರುಮೌಲ್ಯಮಾಪನದಲ್ಲಿ 619 ಅಂಕಗಳಿಸಿ ರಾಜ್ಯಕ್ಕೆ 7ನೇ ರಾಂಕ್ ಪಡೆದಿದ್ದಾರೆ.

ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

error: Content is protected !!