‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’: ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಿಶೇಷ ಪ್ರಾರ್ಥನೆ: ಶ್ರೀ ಕ್ಷೇತ್ರ ಸೌತಡ್ಕದಲ್ಲಿ 120 ಅಗೆಲು ರಂಗಪೂಜೆ ಸೇವೆ

ಕೊಕ್ಕಡ : ಸತತವಾಗಿ 3 ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರಿಗೆ ಅಧಿಕಾರವಾದಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದೆ.

ಸೌತಡ್ಕದ ಮಹಾಗಣಪತಿ ಸನ್ನಿಧಾನದಲ್ಲಿ 120 ಅಗೆಲು ರಂಗಪೂಜೆ ಸೇವೆ ಸಲ್ಲಿಸುವ ಮೂಲಕ ಪ್ರಧಾನ ಮಂತ್ರಿಯವರ ಆಯುರಾರೋಗ್ಯಕ್ಕಾಗಿ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಪ್ರಾರ್ಥಿಸಿದೆ.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

error: Content is protected !!