ಬೆಳ್ತಂಗಡಿ : ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ಸಂಪೂರ್ಣ ವಸತಿನಿಲಯದ ಪರಿಶೀಲನೆ: ಹಾಸ್ಟೇಲ್ ನಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ತಿಳಿಸುವಂತೆ ಸೂಚನೆ

ಬೆಳ್ತಂಗಡಿ : ಪದವಿಪೂರ್ವ ಕಾಲೇಜು ಬೆಳ್ತಂಗಡಿ ಬಳಿ ಇರುವ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಜೂ.12ರಂದು ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ವಸತಿ ನಿಲಯದ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶೀಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು.
ಅಡುಗೆ ಕೋಣೆಯಲ್ಲಿ ಅಹಾರ ದಾಸ್ತಾನು ಡಬ್ವಗಳ ಪರಿಶೀಲಿಸಿ, ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಅರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು.

ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಅಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು.
ವಸತಿ ನಿಲಯದ ಅಧಿಕಾರಿ ಜೋಸೆಪ್ ಮಾಹಿತಿ ನೀಡಿ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದಲ್ಲಿ ಸ್ಥಳದ ಅಭಾವವಿದೆ. ಮಕ್ಕಳ ಸಂಖ್ಯೆ ಕಡಿಮೆ ಮಾಡಿದರೆ ಇರುವ ಮಕ್ಕಳಿಗೆ ಇನ್ನಷ್ಟು ಅನುಕೂಲವಾಗಲಿದೆ. ಇಲ್ಲಿ ದಾಖಲಾತಿ 125 ಕ್ಕೆ ಅವಕಾಶ ಇದ್ದರು ಈಗ 110 ಮಕ್ಕಳನ್ನು ದಾಖಲಾತಿ ಮಾಡಲಾಗಿದೆ. ಎಲ್ಲಾ ವಸತಿ ನಿಲಯದ ಸುತ್ತ ಸಿ.ಸಿ.ಕ್ಯಾಮಾರ ಅಳವಡಿಸಲಾಗಿದೆ. ರಾತ್ರಿ ಹೊತ್ತು ಸಿಬ್ಬಂದಿಗಳು ವಾಸ್ತವ್ಯ ಇದ್ದು ಮಕ್ಕಳ ಸುರಕ್ಷತೆಗೆ ಗಮನ ಹರಿಸುತ್ತಿದ್ದಾರೆ . ನಿವೇಶನ ಸಮಸ್ಯೆ ಸರಕಾರ ವಸತಿ ನಿಲಯ ಮಂಜೂರು ಗೊಳಿಸಿದರೂ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕಡೆ ಸರಕಾರಿ ನಿವೇಶನ ಸಿಗುತ್ತಿಲ್ಲ. ದೂರದ ಹಳ್ಳಿ ಪ್ರದೇಶದಲ್ಲಿ ವಸತಿ ನಿಲಯ ಮಾಡಿದರೆ ಮಕ್ಕಳಿಗೆ ಹೋಗುಬರುವ ಇನ್ನೊಂದು ಸಮಸ್ಯೆಯಾಗುತ್ತದೆ ಈ ಬಗ್ಗೆ ಕಂದಾಯ ಅಧಿಕಾರಿಗಳು ಗಮನ ಹರಿಸಿದರೆ ಒಳ್ಳೆಯದು ಎಂದು ಲೋಕಾಯುಕ್ತ ಅಧಿಕಾರಿಗಳ ಬಳಿ ಪ್ರಸ್ತಾಪಿಸಿದರು. ಜೊತೆಗೆ ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.

ಲೋಕಾಯುಕ್ತ ನಿಯಮ 26 ರಲ್ಲಿ ಅಂಗನವಾಡಿ, ವಸತಿ ನಿಲಯದ ದಿಢೀರ್ ಬೇಟಿ ಮಾಡಿ ಪರಿಶೀಲನೆ ಮಾಡುವ ನಿಯಮವಿದ್ದು ಅದರಂತೆ ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯ ಪರಿಶೀಲನೆ ಮಾಡಲಾಗಿದೆ. ಇಲ್ಲಿನ ಮಕ್ಕಳ ಫಲಿತಾಂಶ ಉತ್ತಮವಾಗಿದೆ. ಬಹುತೇಕ ಉತ್ತಮ ವ್ಯವಸ್ತೆಗಳಿವೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿ. ಕೆಲವೊಂದು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು ಈ ಬಗ್ಗೆ ವರದಿ ನೀಡುವಂತೆ ತಿಳಿಸಲಾಗಿದೆ ಎಂದು ಲೋಕಾಯುಕ್ತ ಇನ್ಸ್ ಪೆೆಕ್ಟರ್ ಅಮಾನುಲ್ಲಾ ತಿಳಿಸಿದರು.

ಲೋಕಾಯುಕ್ತ ಎಸ್.ಪಿ.ನಟರಾಜ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರುಗಳಾದ ಚಂದ್ರಶೇಖರ ಸಿ.ಎಲ್, ಚಂದ್ರಶೇಖರ ಕೆ.ಎನ್, ಅಮಾನುಲ್ಲಾ, ಸಿಬ್ಬಂದಿ ವಿನಾಯಕ್, ಮಹೇಶ್,ಪಾಪಣ್ಣ ಪರಿಶೀಲನೆ ನಡೆಸಿದರು.

error: Content is protected !!