ಜೂ.24 ಲಾಯಿಲದಲ್ಲಿ ‘ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ’

ಬೆಳ್ತಂಗಡಿ: ಜನರ ಕುಂದುಕೊರತೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜೂ.24ರಂದು ಲಾಯಿಲದ ಸಂಗಮ

ಸಭಾಭವನದಲ್ಲಿ ‘ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ/ವೈಯುಕ್ತಿಕ ಸಮಸ್ಯೆಗಳ ನಾಗರಿಕರು ಸಲ್ಲಿಸುವ ಅರ್ಜಿಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ/ಮಾಹಿತಿಯನ್ನು ನೀಡುವ ಸಲುವಾಗಿ ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಖುದ್ದಾಗಿ ಹಾಜರಿದ್ದು ಅಗತ್ಯ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

error: Content is protected !!