ಉಜಿರೆ : ಆಟೋ ಮೇಲೆ ಉರುಳಿ ಬಿದ್ದ ಮರ: ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

ಉಜಿರೆ: ಏಕಾಏಕಿ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಈ ಸಂದರ್ಭದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿಯಾಗಿದ್ದಾರೆ.

ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಜೂ.24ರ ರಾತ್ರಿ ಆಸ್ಪತ್ರೆಗೆ ತೆರಳಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಗಾಯಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

error: Content is protected !!