ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವು..!

ಮಂಗಳೂರು: ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಸಂಭವಿಸಿದೆ.

ಯಾಸಿರ್ ಎಂಬವರ ಮನೆಯ ಮೇಲೆ ಧರೆ ಉರುಳಿದ್ದು ಈ ಸಂದರ್ಭದಲ್ಲಿ ಮನೆಯಲ್ಲಿ ಮಲಗಿದ್ದ ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಈ ನಾಲ್ವರು ಸಾವನ್ನಪ್ಪಿದ್ದಾರೆ.

ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.

error: Content is protected !!