ಬಸ್ ಸಮಸ್ಯೆ,ಜು 01 ರಂದು ಶಾಸಕರಿಂದ ಅಧಿಕಾರಿಗಳೊಂದಿಗೆ ಅದಾಲತ್:

 

 

ಬೆಳ್ತಂಗಡಿ: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ಸಂಘಟಿಸಿದ್ದು ಸಾರ್ವಜನಿಕರು ವಿದ್ಯಾರ್ಥಿಗಳು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!