ಉಜಿರೆ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಮಾರಾಣಾಂತಿಕ ಹಲ್ಲೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಟೈಲರ್ಸ್ ಆಸೋಶಿಯೇಷನ್ ಆಗ್ರಹ, ಮನವಿ ಸಲ್ಲಿಕೆ:

 

 

 

ಬೆಳ್ತಂಗಡಿ:ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು. KSTA
ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು 01 ಸೋಮವಾರ
ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ
ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷರಾದ ಜಯಂತ್ ಉರ್ಲಾoಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ, ವಸಂತ್ ಪೂಜಾರಿ, ಕ್ಷೇತ್ರದ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್ ಕುಮಾರ್, ಖಜಾಂಚಿ ರವೀಂದ್ರ ಗೇರುಕಟ್ಟೆ, ಸದಸ್ಯರಾದ ಜಯಾಚಿದಾನಂದ್,ಉಜಿರೆ ವಲಯದ ಕಾರ್ಯದರ್ಶಿ ಜೀನತ್,, ಬೆಳ್ತಂಗಡಿ ವಲಯದ ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

error: Content is protected !!