ಪಹಣಿಗೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯ: ಜುಲೈ ಒಂದೇ ತಿಂಗಳು ಅವಕಾಶ: ಆಧಾರ್ ಲಿಂಕ್ ಮಾಡಿಸುವುದು ಹೇಗೆ?

ಪಹಣಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯವಾಗಿದ್ದು ಜುಲೈ ಅಂತ್ಯದೊಳಗೆ ಎಲ್ಲಾ ರೈತರು ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕಿದೆ.

ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜೊತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇದನ್ನು ಜಾರಿಗೆ ತಂದಿದೆ. ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವುದನ್ನು ತಡೆಯಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ಇದನ್ನು ಜಾರಿಗೆ ತಂದಿದೆ.

ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಈ ಪ್ರಯುಕ್ತ ಬಾಕಿ ಇರುವ ರೈತರು ಪಹಣಿ ಮತ್ತು ಆಧಾರ್ ಲಿಂಕ್ ಮಾಡಿಸಬೇಕಾಗಿದೆ. ಈ ತಿಂಗಳು ಮುಗಿದ ನಂತರ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರ ನಿಲ್ಲಿಸಲಿದೆ.

ಆಧಾರ್ ಲಿಂಕ್ ಮಾಡಿಸುವುದು ಹೇಗೆ?

ಆಯಾ ಗ್ರಾಮ ಪಂಚಾಯತ್‌ನ ಗ್ರಾಮ ಲೆಕ್ಕಾಧಿಕಾರಿಗಳ ಬಳಿ ರೈತರು ಪಹಣಿಗೆ ಆಧಾರ್ ಲಿಂಕ್ ಮಾಡಿಸಬಹುದಾಗಿದೆ. ಇದಲ್ಲದೆ ಫೋನ್ ಮಾಡಿ ತಾವು ಇರುವ ಜಾಗದಿಂದಲೇ ಆಧಾರ್ ಒಟಿಪಿ ಹೇಳಿ ಪಹಣಿ & ಆಧಾರ್ ಲಿಂಕ್ ಮಾಡಿಸಬಹುದಾಗಿದೆ. ಆಧಾರ್ ಲಿಂಕ್ ಮಾಡಿಸಿದರೆ ನಿಮ್ಮ ಜಮೀನು ಬೇರೆಯವರ ಪಾಲಾಗದಂತೆ ತಡೆಯಬಹುದಾಗಿದೆ.

error: Content is protected !!