ಅಜಿಲಮೊಗರು,ನದಿಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ:

 

 

 

ಬಂಟ್ವಾಳ: ನದಿಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಸುರತ್ಕಲ್ ನ ಮೈಕಲ್ (53) ಎಂಬವರು ಸರಪಾಡಿ ಸಮೀಪದ ಮಾವಿನಕಟ್ಟೆಯ ನೆಂಟರ ಮನೆಗೆ ಬಂದಿದ್ದು ಅಲ್ಲಿಂದ ಗುರುವಾರ ಸಂಜೆ ಸ್ನೇಹಿತರೊಂದಿಗೆ ಬಂಟ್ವಾಳ ತಾಲೂಕಿನ  ಅಜಿಲಮೊಗರು  ಸಮೀಪದ ಕೂಟೇಲು ಸೇತುವೆಯ ಬಳಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು. ತಕ್ಷಣ ಸ್ಥಳೀಯರು ದೋಣಿಯ ಮೂಲಕ ಹುಡುಕಾಟ ನಡೆಸಿದರು. ಬಂಟ್ವಾಳ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿ ಅವರು ಬಂದು ಹುಡುಕಾಟ ನಡೆಸಿದರೂ ವ್ಯಕ್ತಿ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ ಬಿದ್ದು ನಾಪತ್ತೆಯಾಗಿದ್ದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

error: Content is protected !!