ಭಾರೀ ಮಳೆ, ಚಾರ್ಮಾಡಿ ಘಾಟ್ ಗುಡ್ಡ ಕುಸಿತ: ಸದ್ಯ ವಾಹನ ಸಂಚಾರಕ್ಕಿಲ್ಲ ತೊಂದರೆ:

 

 

 

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ಮಂಗಳೂರು ವಿಲ್ಲುಪುರಂ
ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಗೆ ಬಿದಿದ್ದು. ತಕ್ಷಣ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ ಮಳೆ ಇನ್ನಷ್ಟು ಮುಂದುವರಿದರೆ ಹೆಚ್ಚಿನ ಕುಸಿತ ಉಂಟಾಗುವ ಭೀತಿ ಎದುರಾಗಿದೆ. ಸಾವಿರಾರು ವಾಹನಗಳ ಸಂಚಾರವಿರುವ ಈ ಘಾಟಿಯಲ್ಲಿ ಇನ್ನಷ್ಟು ಕುಸಿತ ಉಂಟಾದರೆ ಸಂಪರ್ಕ ಕಡಿತ ಗೊಳ್ಳುವ ಸಾಧ್ಯತೆ ಇದೆ.

error: Content is protected !!