ಶುಕ್ರವಾರ ಕರಾವಳಿಯಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ..!, ಹವಾಮಾನ ಇಲಾಖೆ ಮುನ್ಸೂಚನೆ: ಗುರುವಾರ ಬಿಸಿಲಿನೊಂದಿಗೆ ಬಿಡುವು ನೀಡಿದ್ದ ಮಳೆ, ರಾಜ್ಯದ ವಿವಿಧೆಡೆ ಇನ್ನೂ ಹಲವು ದಿನ ವರುಣನ ಆರ್ಭಟ..!

 

 

ಬೆಳ್ತಂಗಡಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಪ್ರತ್ಯೇಕ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಜುಲೈ 16ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

error: Content is protected !!