ಹುಟ್ಟುಹಬ್ಬಕ್ಕೂ ಮುನ್ನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಭೇಟಿ: ಹರಕೆ ಕೋಲದಲ್ಲಿ ಬಾಲಿವುಡ್ ತಂಡವೇ ಭಾಗಿ

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಜು.14ರಂದು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜುಲೈ 16ರಂದು ನಟಿ ಕತ್ರಿನಾ ಕೈಪ್ ಅವರ ಜನ್ಮದಿನವಿದ್ದು ಬರ್ತ್‍ಡೇಗೂ ಮುನ್ನ ಅವರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ಜುಲೈ 14 ರ ಭಾನುವಾರ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ನಡೆದ ಹರಕೆ ಕೋಲದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರ, ಪುತ್ರಿ, ಅಳಿಯನ ಜೊತೆ ಖ್ಯಾತ ನಟಿ ಕತ್ರಿನಾ ಕೈಫ್ ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಕೋಲದಲ್ಲಿ ಭಾಗವಹಿಸಿದ್ದಾರೆ.

ನಿನ್ನೆ ಬಾಲಿವುಡ್ ನ ದೊಡ್ಡ ತಂಡವೇ ಆಗಮಿಸಿದ ಕಾರಣದಿಂದ ಯಾರಿಗೂ ಫೋಟೋ ವೀಡಿಯೋಕ್ಕೆ ಅವಕಾಶವನ್ನು ನೀಡಿಲ್ಲ. ಇದರ ನಡುವೆಯೂ ಕ್ಷೇತ್ರದಲ್ಲಿದ್ದ ಕತ್ರಿನಾ ಕೈಫ್ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

error: Content is protected !!