ಮಳೆಯ ಅಬ್ಬರ: ನಿಡಿಗಲ್‌ನಲ್ಲಿ ಮನೆಯ ಗೋಡೆ ಕುಸಿತ: ತಪ್ಪಿದ ಭಾರೀ ಅನಾಹುತ..!

ಬೆಳ್ತಂಗಡಿ: ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದರ ಗೋಡೆ ಕುಸಿದಿರುವ ಘಟನೆ ನಿಡಿಗಲ್ ಎಂಬಲ್ಲಿ ಸಂಭವಿಸಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಜೀನದತ್ತ ಇಂದ್ರ ಎಂಬವರ ಮನೆಯ ಹಿಂಬದಿಯ ಗೋಡೆ ಮತ್ತು ಮೇಲ್ಛಾವಣಿ ಜು.16ರಂದು ಕುಸಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಮನೆಯ ಹಿಂಬದಿ ಯಾರು ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಕಲ್ಮಂಜ ಪಂಚಾಯತ್ ಕಾರ್ಯದರ್ಶಿ ಸರೋಜಿನಿ, ಗ್ರಾಮ ಆಡಳಿತ ಅಧಿಕಾರಿಯಾದ ರಣಿತಾ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ರುಕೇಶ್ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಮನೆಯವರು ಸೂಕ್ತ ಪರಿಹಾರ ಕೊಟ್ಟು ನೆರವಾಗಬೇಕು ಎಂದು ಕೇಳಿಕೊಂಡಿದ್ದಾರೆ.

error: Content is protected !!