ಕಾಮಗಾರಿ ಕೆಲಸಕ್ಕೆ ಬೇರೆ ರಾಜ್ಯದಿಂದ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ: ಟೆಕ್ನಿಕಲ್ ಮಾಹಿತಿ ಆಧಾರಿಸಿ ಮಹಿಳೆಯನ್ನು ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಹೊರರಾಜ್ಯದಿಂದ ಬಂದಿದ್ದ ಮಹಿಳೆಯೋರ್ವರು ನಾಪತ್ತೆಯಾಗಿ 9 ದಿನಗಳ ಬಳಿಕ ಪತ್ತೆಯಾಗಿದ್ದು ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಯಶಸ್ಸಾಗಿದೆ.

ಗುರುವಾಯನಕೆರೆ ಬಳಿಯ ಕಟ್ಟಡ ಕೆಲಸಕ್ಕೆ ಕಲ್ಕತ್ತಾ ಮೂಲದ ದಂಪತಿಗಳಾದ ಮುಷರಫ್ ಮತ್ತು ರೀಮಾ(24) ಬಂದಿದ್ದು, ಜು.8 ರಂದು ಪತ್ನಿ ರೀಮಾ ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದಾರೆ. ಆದರೆ ಆ ಬಳಿಕ ವಾಪಸ್ ಬಾರದೆ ಇದ್ದು ಈ ಬಗ್ಗೆ ಗಂಡ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.8 ರಂದು ನಾಪತ್ತೆ ದೂರು ನೀಡಿದ್ದರು.

ಪ್ರಕರಣದ ಜಾಡು ಹಿಡಿದ ಬೆಳ್ತಂಗಡಿ ಪೊಲೀಸರು ಟೆಕ್ನಿಕಲ್ ಮಾಹಿತಿ ಆಧಾರಿಸಿ ಜು.17 ರಂದು ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪತ್ತೆಹಚ್ಚಿದ್ದಾರೆ. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ಗಂಡನ ಜೊತೆ ಕಳುಹಿಸಿಕೊಟ್ಟು ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಮತ್ತು ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್ , ಇನ್ಸ್ ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದ ಸಿಬ್ಬಂದಿ ಚರಣ್ ರಾಜ್, ಬಸವರಾಜ್ , ಬೆನ್ನಿಚ್ಚನ್ ಭಾಗವಹಿಸಿದರು.

error: Content is protected !!