ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ತುರ್ತು ಸಭೆ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜು.28ರಂದು ಸಭೆ ನಡೆದಿದೆ.

ಪ್ರವಾಸಿ ಮಂದಿರದಲ್ಲಿರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ನಡೆದ ತುರ್ತು ಸಭೆಯಲ್ಲಿ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ರಾಷ್ಟಿçÃಯ ಹೆದ್ದಾರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಸಹಾಯಕ ಅಭಿಯಂತರರಾದ ಕೀರ್ತಿ, ಗುರುಪ್ರಸಾದ್ ಉಪಸ್ಥಿತರಿದ್ದರು.

error: Content is protected !!