ಶಾಸಕ ಹರೀಶ್ ಪೂಂಜ ಕಾಣೆಯಾಗಿದ್ದಾರೆ, ಹುಡುಕಿಕೊಡಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ:

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಕಳೆದ 15 ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು ಇಡೀ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೂ ಶಾಸಕರು ಮಾತ್ರ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರರು 30 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಇನ್ನೂ ಏನೂ ಆಗಿಲ್ಲ. ಆದರೆ ಶಾಸಕ ಹರೀಶ್ ಪೂಂಜಾ ಕೇವಲ 3 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಮಳೆಯ ನೀರಿಗೆ ಕೊಚ್ಚಿ ಹೋಗಿದೆ. ಅದೇ ರೀತಿ ಶಾಸಕ ಹರೀಶ್ ಪೂಂಜಾ ಕೊಚ್ಚಿ ಬೆಂಗಳೂರಿನಲ್ಲಿ ಸಿಲುಕಿದ್ದಾರೆ ಎಂದು ಟೀಕಿಸಿದರು. ಈ ಹಿಂದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಟಾರ್ಚ್ ಹಾಕಿ ಹುಡುಕಬೇಕು ಎಂದ ಶಾಸಕರನ್ನು ಈಗ ನೆರೆ ಸಂತ್ರಸ್ತರು ಟಾರ್ಚ್ ಹಾಕಿ ಹುಡುಕಬೇಕಾಗಿದೆ ಎಂದರು.ಯುವ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ಶೆಟ್ಟಿ ಆರಂಬೋಡಿ ಮಾತನಾಡಿ ಕಳೆದ ಚುನಾವಣೆಯಲ್ಲಿ 1 ಲಕ್ಷ ಮತ ನೀಡಿದ ತಾಲೂಕಿನ ಜನರು ಸಂಕಷ್ಟದಲ್ಲಿರುವಾಗ ಶಾಸಕ ಹರೀಶ್ ಪೂಂಜಾ ಬೆಂಗಳೂರಿನಲ್ಲಿ ರೌಡಿಯೊಬ್ಬನ ಹಿತ ಕಾಯುವ ಬೇಜಾವ್ದಾರಿ ಕೆಲಸ ಮಾಡುತ್ತಿದ್ದಾರೆ. ಇಂತಹ ಅವಿವೇಕಿ ಶಾಸಕರು ತಾಲೂಕಿಗೆ ಸಿಕ್ಕಿರುವುದು ದುರಂತ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ , ಕಳಿಯ ಗ್ರಾಮ ಪಂಚಾಯತ್ ಸದಸ್ಯ ಕರೀಂ ಗೇರುಕಟ್ಟೆ , ಕಾಂಗ್ರೆಸ್ ಪಕ್ಷದ ಮುಖಂಡರಾದ ದೇವಿಪ್ರಸಾದ್ ಶೆಟ್ಟಿ ಅಳದಂಗಡಿ , ಹನೀಪ್ ಉಜಿರೆ ಮಾತನಾಡಿದರು.

 

ಜಾಹೀರಾತು

ಮಹಿಳಾ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷೆ ವಂದನಾ ಭಂಡಾರಿ , ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸವಿತಾ ಕೊರಗ , ಎಸ್ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್ , ಮುಖಂಡರಾದ ರವೀಂದ್ರ ಬಿ ಅಮಿನ್ , ಸದಾನಂದ ನಾಲ್ಕೂರು , ಪ್ರಜ್ವಲ್ ಜೈನ್ ಅಳದಂಗಡಿ , ಅಶ್ವಿನ್ ಕುಮಾರ್ ಬಳೆಂಜ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!