ಬೆಳ್ತಂಗಡಿ: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಭೇಟಿ: ಶ್ರೀದೇವರ ಆಶೀರ್ವಾದ ಪಡೆದ ರಾಕಿಂಗ್ ಸ್ಟಾರ್ ಕುಟುಂಬ

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ನಟ ಯಶ್ ಕುಟುಂಬ ಸಮೇತರಾಗಿ ಆ.06ರಂದು ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ಆಶೀರ್ವಾದ ಪಡೆದಿದ್ದಾರೆ.

ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಇಲ್ಲಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

error: Content is protected !!