ಕೋಲಾರ : ನವ ವಧು-ವರ ಹೊಡೆದಾಟ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬೆಳಕಿಗೆ: ತನಿಖೆಗೆ ಮುಂದಾದ ಪೊಲೀಸರು

ಕೋಲಾರ: ಪರಸ್ಪರ ಪ್ರೀತಿಸಿ, ಹಸಮಣೆ ಏರಿ, ಅರುಂಧತಿ ನಕ್ಷತ್ರ ನೋಡಿ ಮನೆ ಸೇರಿಕೊಂಡಿದ್ದ ದಂಪತಿ ಸಂಜೆ ಪರಸ್ಪರ ಬಡಿದಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಪಕ್ರರಣ ಸಂಬಂಧ ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಮದುವೆಯಾದ ದಿನವೆ ಸಂಜೆ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡ ಲಿಖಿತಾಶ್ರೀ ಹಾಗೂ ನವೀನ್ ಪರಸ್ಪರ ಹೊಡೆದಾಡಿಕೊಂಡಿದ್ದರು. ಲಿಖಿತಾಶ್ರೀ ಕೆಜಿಎಫ್ ಆಸ್ಪತ್ರೆಯಲ್ಲಿ ಮೊನ್ನೆ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ನವೀನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಪ್ರಾಣಬಿಟ್ಟಿದ್ದಾರೆ.

ಈ ಘಟನೆಯಲ್ಲಿ ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ. ಮೊದಲು ಲಿಖಿತಶ್ರೀ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ನಂತರ ತಾನೂ ತಲೆಗೆ ಮಚ್ಚಿನಿಂದ ಹೊಡೆದುಕೊಂಡಿದ್ದಾನೆ ಎಂಬ ಶಂಕೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬೆಳಕಿಗೆ ಬಂದಿದೆ. ಲಿಖಿತಶ್ರೀ ನವೀನ್ ಮೇಲೆ ಹಲ್ಲೆ ಮಾಡಿಲ್ಲ ಅನ್ನೋದು ಸ್ಪಷ್ಟವಾಗಿದ್ದು, ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಒಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಸದ್ಯ ಕೋಲಾರ ಜಿಲ್ಲೆ ಕೆಜಿಎಫ್ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ದ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಈ ಘಟನೆಯಲ್ಲಿ ಮೂರನೇ ವ್ಯಕ್ತಿ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಆಂಡರ್ಸನ್ ಪೇಟೆ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಇಂದು ಪೊಲೀಸರು ನವೀನ್, ಲಿಖಿತಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಲಿದ್ದಾರೆ. ಇಬ್ಬರ ಮೊಬೈಲ್ ಕಾಲ್ ಡೀಟೇಲ್ಸ್ ಪರಿಶೀಲನೆ ನಡೆಸಲಾಗುತ್ತೆ. ಘಟನೆಗೂ ಮುನ್ನ ಇಬ್ಬರು ಯಾರ ಜೊತೆಗಾದರೂ ಫೋನ್‌ನಲ್ಲಿ ಮಾತನಾಡಿದ್ರ ಅನ್ನೋದರ ಕುರಿತು ತನಿಖೆ ನಡೆಸಲಾಗುತ್ತೆ. ಮದುವೆಗೂ ಮೊದಲು ಎರಡು ಕುಟುಂಬದ ನಡುವೆ ಏನಾದ್ರು ಜಗಳಗಳಿದ್ದವಾ? ನವೀನ್ ಮಾನಸಿಕ ಸ್ಥಿತಿ ಹೇಗಿತ್ತು? ಎಂದು ನವೀನ್ ಸ್ನೇಹಿತರು ಹಾಗೂ ಆಪ್ತರ ವಿಚಾರಣೆ ಮಾಡಿ ಪೊಲೀಸರು ಮಾಹಿತಿ ಕಲೆ ಹಾಕಲಿದ್ದಾರೆ.

ಆ.08ರ ಸಂಜೆ ಬೈನೇಹಳ್ಳಿಯಲ್ಲಿ ಲಿಖಿತಶ್ರೀ ಅವರ ಅಂತ್ಯ ಸಂಸ್ಕಾರವನ್ನು ಹಾಗೂ ಚಂಬಾರಸನಹಳ್ಳಿ ಗ್ರಾಮದಲ್ಲಿ ನವೀನ್ ಅಂತ್ಯಸಂಸ್ಕಾರ ಮಾಡಿದ್ದಾರೆ.

error: Content is protected !!