ಬೆಳ್ತಂಗಡಿ : ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ ಕಾರು ಕಾರು ಮಾಲೀಕನ ತರಾಟೆಗೆ ತೆಗೆದುಕೊಂಡ ಮಹಿಳೆ ,ಕ್ಷಮೆಯಾಚನೆ:

 

 

ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕಾರನ್ನು ಅಡ್ಡ ನಿಲ್ಲಿಸಿ ಹೋಗಿದ್ದ ಮಾಲೀಕನಿಗೆ ಸಂಚಾರಿ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಆ.11 ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಬ್ಯಾಂಕ್ ನ ಶಾಖಾ ಕಚೇರಿಗೆ ಹಾಗೂ ಖಾಸಗಿ ಮನೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಆ.11 ರಂದು 12:30 ಕ್ಕೆ ಕಾರನ್ನು ಮಾಲೀಕ ಮೋಹನ್ ಕಲ್ಮಂಜ ಎಂಬವರು ಇಟ್ಟು ಬೇರೆಡೆ ಹೋಗಿದ್ದು ಎಷ್ಟೇ ಕರೆ ಮಾಡಿ ತಿಳಿಸಿದರೂ ಕ್ಯಾರೆ ಮಾಡಿರಲ್ಲಿಲ್ಲ ಬ್ಯಾಂಕ್ ಸಭೆಗೆ ಬರಬೇಕಾದ ಸದಸ್ಯರ ಕಾರು ಒಳಪ್ರವೇಶ ಮಾಡಲು ಸಾಧ್ಯವಾಗಿರಲ್ಲಿಲ್ಲ, ಪಕ್ಕದ ಖಾಸಗಿ ಮನೆಯ ಮಾಲಕಿ ವಯಸ್ಸಾದ ತಾಯಿ ಜೊತೆ ಬೆಂಗಳೂರಿಗೆ ಹೋಗಲು ರಸ್ತೆ ಕಡೆ ಬರುವಾಗ ಕೂಡ ಕಾರು ಅಡ್ಡ ಇದ್ದು ಮಾಲೀಕ ಒಂದು ಗಂಟೆಯಾದರೂ ಬಂದೇ ಇಲ್ಲ ಕೊನೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರನ್ನು ಕರೆಸಲಾಯಿತು.

ಖಾಸಗಿ ಮನೆಯ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಕಾರು ಮಾಲೀಕ ಮೋಹನ್ ಕಲ್ಮಂಜ ಅವರಿಗೆ ಕರೆ ಮಾಡಿ ತಕ್ಷಣ ಬರಲು ತಿಳಿಸಿದರೂ ತಡವಾಗಿ 2:30 ಕ್ಕೆ ಆಗಮಿಸಿದ್ದಾರೆ.

ಈ ವೇಳೆ ಪೊಲೀಸರ ಮುಂದೆಯೇ ಮಹಿಳೆ ಹಾಗೂ ಸಾರ್ವಜನಿಕರು ಸರಿಯಾಗಿ ಮೋಹನ್ ಕಲ್ಮಂಜ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು. ಈ ವೇಳೆ ಕಾರು ಮಾಲೀಕ ಮಹಿಳೆ ಹಾಗೂ ಸಾರ್ವಜನಿಕರ ಮುಂದೆ ಕ್ಷಮೆ ಯಾಚಿಸಿದ್ದಾರೆ. ಬಳಿಕ ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಪೊಲೀಸರು ಕಾರಿನ ಮೇಲೆ ದಂಡ ವಿಧಿಸಿದ್ದಾರೆ. ಮಹಿಳೆ ಕಾರು ಮಾಲೀಕ ಮೋಹನ್ ಕಲ್ಮಂಜನಿಗೆ ಕ್ಲಾಸ್ ತೆಗೆದುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

error: Content is protected !!