ಬದುಕು ಕಟ್ಟೋಣ ಬನ್ನಿ ತಂಡದಿಂದ 78ನೇ ಸ್ವಾತಂತ್ರ‍್ಯ ದಿನಾಚರಣೆ: 100 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ: ಉದ್ಯಮಿ ಬಸವರಾಜ್ ಮತ್ತು ಮೋಹನ್ ಚೌಧರಿಗೆ ವಿದ್ಯಾರ್ಥಿಗಳಿಂದ ಸನ್ಮಾನ

ಬೆಳ್ತಂಗಡಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವಾಸೀಯ ವಿದ್ಯಾಲಯ ಮುಗುಳಿ ಬೆಳ್ತಂಗಡಿಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ), ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆ.15ರಂದು 78ನೇ ಸ್ವಾತಂತ್ರ‍್ಯ ದಿನವನ್ನು ಆಚರಿಸಲಾಯಿತು.

ಎಸ್ ಕೆ ಡಿ ಆರ್ ಡಿ ಪಿ ಯ ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಜಯಶಂಕರ್ ಶರ್ಮರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಉದ್ಯಮಿ ಬಸವರಾಜ್ ಮತ್ತು ಉದ್ಯಮಿ ಮೋಹನ್ ಚೌಧರಿಯವರನ್ನು ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನಿಂದ 100 ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ಸಿಲ್, ಸ್ಕೇಚ್ ಪೇನ್, ರಬ್ಬರ್ , ಪೇನ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಶಾಂತ್, ಬೆಳ್ತಂಗಡಿ ರೋಟರಿ ಕಾರ್ಯದರ್ಶಿ ಸಂದೇಶ್, ನಿವೃತ್ತ ಸೈನಿಕ ಕುಲದೀಪ್ ಸಿಂಗ್, ಮುಖ್ಯೋಪಾಧ್ಯಾಯ ವಿಠಲ್ ಬಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವನಿ ಶಂಕರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ವಿಷ್ಣು ಸೇವಾ ಸಮಾಜ ಮೋಹನ್ ಚೌದರಿ, ಉಜಿರೆ ಸಂಧ್ಯಾ ಫ್ರೇಶ್ ಆಡಳಿತಾಧಿಕಾರಿ ಅರ್ಚನಾ ಪೈ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಸದಸ್ಯರು ಹಾಗೂ ಉಜಿರೆ ಸಂಧ್ಯಾ ಫ್ರೇಶ್ ಸಿಬ್ಬಂದಿಗಳು, ಶಿಕ್ಷಕ ವೃಂದದವರು, ಶಾಲಾ ಮಕ್ಕಳು ಭಾಗಿಯಾಗಿದ್ದರು.

error: Content is protected !!