ಕಾಂತಾರಕ್ಕೆ ರಾಷ್ಟ್ರೀಯ ಪ್ರಶಸ್ತಿ: “ದೈವದ ಆಶೀರ್ವಾದದಿಂದ ನಾವು ಈ ಕ್ಷಣ ತಲುಪಿದ್ದೇವೆ”: ಸಾಮಾಜಿಕ ಜಾಲತಾಣದಲ್ಲಿ ರಿಷಬ್ ಶೆಟ್ಟಿ ಪೋಸ್ಟ್: ಡಿವೈನ್ ಸ್ಟಾರ್ ಸ್ಪೆಷಲ್ ಪೋಸ್ಟ್ ನಲ್ಲಿ ಇನ್ನೇನಿದೆ..?

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ‘ಕಾಂತಾರ’ ಸಿನಿಮಾಗೆ ಅತ್ಯುತ್ತಮ ಮನರಂಜನಾ ಚಿತ್ರ ಹಾಗೂ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಲಭಿಸಿದ್ದು ಈ ಬಗ್ಗೆ ಡಿವೈನ್ ಸ್ಟಾರ್ ಸಾಮಾಜಿಕ ಜಾಲತಾಣದಲ್ಲಿ ಸ್ಪೆಷಲ್ ಪೋಸ್ಟ್ ಹಾಕಿದ್ದಾರೆ.

ಪೋಸ್ಟ್ ಗೆ “ನನ್ನ ಹೃದಯ ಕೃತಜ್ಞತಾ ಭಾವದಿಂದ ತುಂಬಿದೆ” ಎಂಬ ಕ್ಯಾಪ್ಷನ್ ಕೊಟ್ಟಿದ್ದು ಬಳಿಕ “ಕಾಂತಾರಕ್ಕೆ ಸಿಕ್ಕಿರುವ ರಾಷ್ಟ್ರೀಯ ಪ್ರಶಸ್ತಿಯ ಗೌರವಕ್ಕೆ ನಾನು ನಿಜವಾಗಿಯೂ ಆಭಾರಿಯಾಗಿದ್ದೇನೆ. ನನ್ನ ಈ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು ಮತ್ತು ವಿಶೇಷವಾಗಿ ಹೊಂಬಾಳೆ ಫಿಲ್ಮ್ಸ್ ತಂಡಕ್ಕೆ ನಾನು ನನ್ನ ಹೃತ್ಫೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರೇಕ್ಷಕರು ಈ ಚಿತ್ರಕ್ಕೆ ಕೊಟ್ಟಿರುವ ಬೆಂಬಲವು ನನ್ನಲ್ಲಿ ಇನ್ನಷ್ಟು ಜವಾಬ್ದಾರಿ ತುಂಬಿದೆ. ನಮ್ಮ ವೀಕ್ಷಕರಿಗೆ ಇನ್ನೂ ಉತ್ತಮ ಚಿತ್ರ ನೀಡಲು ಇನ್ನೂ ಹೆಚ್ಚು ಶ್ರಮಿಸಲು ನಾನು ಬದ್ಧನಾಗಿದ್ದೇನೆ. ಅತ್ಯಂತ ಗೌರವದಿಂದ ನಾನು ಈ ಪ್ರಶಸ್ತಿಯನ್ನು ಕನ್ನಡ ಪ್ರೇಕ್ಷಕರು, ದೈವ ನರ್ತಕರು, ಅಪ್ಪು ಸರ್‌ಗೆ ಅರ್ಪಿಸುತ್ತೇನೆ. ದೈವದ ಆಶೀರ್ವಾದದಿಂದ ನಾವು ಈ ಕ್ಷಣ ತಲುಪಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

error: Content is protected !!