‘ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮೆರಾಗಳಿಗೆ ಮಹತ್ವ’: ವೃತ್ತ ನಿರೀಕ್ಷರಾದ ನಾಗೇಶ್ ಕದ್ರಿ

ಉಜಿರೆ : ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮೆರಾಗಳ ಪಾತ್ರ ಮಹತ್ವದಾಗಿದೆ , ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ದುರಸ್ತಿಯ ಉದ್ಯೋಗ ತರಬೇತಿ ಪಡೆದ ನಿಮಗೆ ಇವತ್ತು ತುಂಬಾ ಅವಕಾಶಗಲಿವೆ ಎಂದು ಬೆಳ್ತಂಗಡಿ ಗ್ರಾಮಂತರ ಪೋಲಿಸ್ ವಿಭಾಗದ ವೃತ್ತ ನಿರೀಕ್ಷರಾದ ನಾಗೇಶ್ ಕದ್ರಿ ಹೇಳಿದ್ದಾರೆ.

ಅವರು ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮೆರಾ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಕೆನರಾ ಬ್ಯಾಂಕಿನಲ್ಲಿ ಹೊಸತಾಗಿ ಆರಂಭಿಸಿದ ಜನಧನ್ ಖಾತೆ ಪುಸ್ತಕ, ವಿತ್ತರಿಸಿ ಮಾತನಾಡಿದರು.

ಇಂದು ಪ್ರತಿಯೋಂದು ಕೆಲಸದಲ್ಲಿ ಮನೆಯಲ್ಲಿ, ಆಟ, ಪಾಠ, ನೋಟಕ್ಕೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲೇ ಬೇಕು ಅನ್ನುವ ಅನಿರ್ವಾಯತೆ ಬಂದಿದೆ. ಈ ಹಿನ್ನಲೆಯಲ್ಲಿ ಇಂತಹ ತರಬೇತಿ ಪಡೆದ ನಿಮಗೆ ಮುಂದಿನಗಳನ್ನು ಬೇರೆ ಬೇರೆಯಲ್ಲಿ ಉದ್ಯಮ, ವ್ಯವಹಾರ ನಡೆಸಲು ಅನುಕೂಲವಾಗುತ್ತದೆ. ಹಾಗೇನೆ ಉತ್ತಮ ಗುಣಮಟ್ಟದ ವಸ್ತುಗಳನ್ನೇ ಬಳಸಿ, ಉತ್ತಮವಾದ ಸೇವೆ ನೀಡಿ . ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ಅವರು, ‘ಹೊಸ ಹೊಸ ಅವಿಷ್ಕಾರಗಳ ಜೊತೆಗೆ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಬೆಳೆಸಿ’ ಎಂದು ಆಶಿಸಿದರು.

ಶಿಬಿರದಲ್ಲಿ ಸುಮಾರು 32 ಜನ ಭಾಗವಹಿಸಿದ್ದು ಹರಿಕೃಷ್ಣ, ಸುಶಿಲ್, ನವೀನ ತರಬೇತಿಯ ಅನುಭವ ಹಂಚಿಕೊಂಡರು.

ಚಂದ್ರಹಾಸ ಪ್ರಾರ್ಥಿಸಿ, ಕೆ.ಕರುಣಾಕರ ಜೈನ್ ವಂದಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!