ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ:ಮಹತ್ವದ ಸುಳಿವು ಪೊಲೀಸರಿಗೆ ಲಭ್ಯ..!: ಆಸ್ತಿ ವಿಚಾರಕ್ಕೆ ಸಂಬಂಧಿಕರಿಂದಲೇ ಕೃತ್ಯ..?

ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌಂಡ್ ನಿವಾಸಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು, ತನ್ನ ಹತ್ತಿರದ  ಸಂಬಂಧಿಗಳು   ಈ ಕೃತ್ಯ ಎಸಗಿರುವ  ಹಾಗೂ ಇಬ್ಬರು ಸೇರಿ ಕೊಲೆ ಮಾಡಿರುವ ಬಗ್ಗೆಯೂ ಪೊಲೀಸರಿಗೆ ಸ್ಪಷ್ಟ  ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ  ಕಾರ್ಯಪೃವೃತ್ತರಾಗಿದ್ದು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಸ್ಪಷ್ಟ  ಮಾಹಿತಿ ಪೊಲೀಸರಿಂದ  ಸಿಗಲಿದೆ.

error: Content is protected !!