ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಕಿರುಕುಳ: ಕಾಮಾಂಧನ ಮನೆಗೆ ನುಗ್ಗಿ ಹೆಡೆಮುರಿ ಕಟ್ಟಿದ ಮಣಿಪಾಲ ಪೊಲೀಸರು..!

ಸಾಂದರ್ಭಿಕ ಚಿತ್ರ

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿದ ಕಾಮಾಂಧನನ್ನು ಮಣಿಪಾಲ ಪೊಲೀಸರು ಮನೆಯಿಂದಲೇ ಹಡೆಮುರಿಕಟ್ಟಿ ಜೈಲುಕಂಬಿ ಎಣಿಸುವಂತೆ ಮಾಡಿದ್ದಾರೆ.

ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಕಾಲ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ, ಬೆಂಗಳೂರು- ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂದ ಯುವತಿಗೆ ಕಾಮಾಂಧನೊಬ್ಬ ಕೀಟಲೆ ಮಾಡಿದ್ದಾನೆ.

ಘಟನೆ ಸಂಬಂಧ ದೂರು ದಾಖಲಾಗಿದ್ದು ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ಅವರ ನೇತೃತ್ವದ ಪೊಲೀಸ್ ಸಿಬ್ಬಂದಿಗಳು ಆ ವ್ಯಕ್ತಿಯ ಮನೆಗೆ ನುಗ್ಗಿ ಆತನ ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ.

error: Content is protected !!