ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ: ನಾಳೆ 20 ನೇ ವರ್ಷದ ಮೊಸರು ಕುಡಿಕೆ ಉತ್ಸವ; ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವದೂತೆ ಗುಳಿಗೆ:

 

 

 

 

ಬೆಳ್ತಂಗಡಿ:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ವತಿಯಿಂದ ನಾಳೆ ಸೆ 01 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸಭಾ ಕಾರ್ಯಕ್ರಮ, ಕ್ರೀಡಾಕೂಟ, ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ  ಲಾಯಿಲ ವಿಘ್ನೇಶ್ವರ ಕಲಾ ಮಂದಿರ ವಠಾರದಲ್ಲಿ ಜರುಗಲಿದೆ.‌ಸಾರ್ವಜನಿಕರಿಗೆ , ಮಹಿಳೆಯರಿಗೆ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಫರ್ಧೆ, ಹಗ್ಗಜಗ್ಗಾಟ,ವಾಲಿಬಾಲ್ , ಕಬಡ್ಡಿ, ಮಡಕೆ ಒಡೆಯುವುದು, ಮಲ್ಲಕಂಬ ಸೇರಿದಂತೆ ವಿವಿಧ ಆಟೋಟ ಸ್ಫರ್ಧೆಗಳು ನಡೆಯಲಿದೆ. ಅದಲ್ಲದೇ ಮುದ್ದು ಕೃಷ್ಣ ವೇಷ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ನಡೆಯಲಿದೆ. ರಾತ್ರಿ 8.30 ಗಂಟೆಗೆ ಕಲಾ ಸಂಗಮ ಕಲಾವಿದರಿಂದ “ಶಿವದೂತೆ ಗುಳಿಗೆ” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

error: Content is protected !!