ಕನ್ಯಾಡಿ, ಕಾರು ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿ,ಮೂವರಿಗೆ ಗಾಯ:

 

 

ಬೆಳ್ತಂಗಡಿ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾದ ಘಟನೆ ಕನ್ಯಾಡಿ ಶಾಲಾ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಉಜಿರೆಯಿಂದ ಧರ್ಮಸ್ಥಳಕ್ಕೆ ಬರುತಿದ್ದ ಯಾತ್ರಾರ್ಥಿಗಳ ಕಾರೊಂದು ಕನ್ಯಾಡಿ ಬಳಿ ರಿಕ್ಷಾವನ್ನು ಓವರ್ ಟೇಕ್ ಮಾಡುವ ವೇಳೆ ಡಿಕ್ಕಿ ಹೊಡೆದಿದ್ದು ರಿಕ್ಷಾ ಪಲ್ಟಿಯಾಗಿ ರಸ್ತೆ ಬದಿ ಉರುಳಿ ಬಿದ್ದಿದೆ.‌ ರಿಕ್ಷಾ ಚಾಲಕ ಸೇರಿದಂತೆ ಪುಂಜಾಲಕಟ್ಟೆಯ  ಮೂವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಅಪಘಾತವೆಸಗಿದ ಕಾರು  ನಿಲ್ಲಿಸದೇ ಪರಾರಿಯಾಗಿದ್ದು ನೇತ್ರಾವತಿ ಸ್ನಾನ ಘಟ್ಟದ ಬಳಿ ಕಾರು ಪತ್ತೆಯಾಗಿದ್ದು ಚಾಲಕ ನಾಪತ್ತೆಯಾಗಿದ್ದಾನೆ. ಈ ಬಗ್ಗೆ  ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

error: Content is protected !!