ಲೈವ್‌ ಅಸೋಸಿಯೇಶನ್‌ ದ.ಕ. ಉಡುಪಿ ಪದಾಧಿಕಾರಿಗಳ ಆಯ್ಕೆ: ಗೌರವಾಧ್ಯಕ್ಷರಾಗಿ ವಾಲ್ಟರ್ ನಂದಳಿಕೆ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್‌ ಎಂ. :

 

 

 

 

ಕಾರ್ಕಳ – ಲೈವ್‌ ಅಸೋಸಿಯೇಶನ್‌ ದ.ಕ. ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್‌ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ.

ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್‌ ಅಸೋಸಿಯೇಶನ್‌ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಪೂಜಾರಿ ಬಂಟ್ವಾಳ, ಕ್ರೀಡಾ ಕಾರ್ಯದರ್ಶಿಯಾಗಿ ರಾಘವೇಂದ್ರ ಮೂಡುಬಿದಿರೆ ಅವರನ್ನು ಆಯ್ಕೆ ಮಾಡಲಾಯಿತು.ಗೌರವಾಧ್ಯಕ್ಷರಾಗಿ ವಾಲ್ಟರ್‌ ನಂದಳಿಕೆ ಮತ್ತು ಗೌರವ ಸಲಹೆಗಾರರಾಗಿ ಪದ್ಮಪ್ರಸಾದ್ ಜೈನ್ ಅವರನ್ನು ಆಯ್ಕೆ ಮಾಡಲಾಯಿತು.

error: Content is protected !!