ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಮೃತದೇಹ ಪತ್ತೆ..!

ಚಾಮರಾಜನಗರ: ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತದೇಹವೊಂದು ಕೊಳ್ಳೇಗಾಲ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣ ಬಳಿ ಪತ್ತೆಯಾಗಿದೆ.

ಸೆ.20ರ ಮಧ್ಯಾಹ್ನದಿಂದ ನಿಂತಿರುವ ಕಾರಿನ ಡೋರ್ ನಿಂದ ರಕ್ತ ಕೆಳಗಡೆ ಸುರಿದು ದುರ್ವಾಸನೆ ಬರುತ್ತಿತ್ತು. ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೊಳ್ಳೇಗಾಲ ಪೊಲೀಸ್ ಇನ್ ಸ್ಪೆಕ್ಟರ್ ಶಿವ ಮಾದಯ್ಯ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ ಸ್ಪೆಕ್ಟರ್ ಸುಪ್ರೀತ್, ಅಪರಾಧ ವಿಭಾಗದ ಸಬ್ ಇನ್ ಸ್ಪೆಕ್ಟರ್ ಚಲುವರಾಜು ಹಾಗೂ ಸಿಬ್ಬಂದಿ ಸ್ಥಳಕ್ಕಾಗಿಮಿಸಿದಾಗ ಸುಮಾರು 40ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ ಮೃತದೇಹ ಕಾರಿನ ಹಿಂಬದಿ ಸೀಟ್ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!