ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ದಿನಾಂಕ ಸೆ.19ರಂದು ಜ್ಯೋತಿ ಆಸ್ಪತ್ರೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಲಾಯಿತು.

ದಯಾ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ವೈದ್ಯಕೀಯ ತಂಡವನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಆಸ್ಪತ್ರೆಯ ಆಡಳಿತಾಧಿಕಾರಿಯವರಾದ ಸಿಸ್ಟರ್.ಮೆರಿಟ್, ಡಾ.ಸಿಸ್ಟರ್.ಜೆನಿಫರ್, ವೈದ್ಯಾಧಿಕಾರಿಗಳು, ಡಾ.ನವ್ಯಾ ಪೌಲ್, ವೈದ್ಯಾಧಿಕಾರಿಗಳು, ಜೆಸಿಂತಾ ತೌರೋ, ಲೆಕ್ಕಿಗರು, ಸಿಸ್ಟರ್. ಡಾನಿಶಾ, ಶುಶ್ರೂಷಕಿ, ಹಾಗೂ ಶ್ರೀಯುತ.ರಂಜಿತ್, ಪಿ.ಆರ್.ಒ ಮುಂತಾದವರು ಭಾಗವಹಿಸಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.

ಈ ಶಿಬಿರದಲ್ಲಿ ಶಾಲೆಯ 82 ಮಕ್ಕಳು ಭಾಗವಹಿಸಿ ಸೂಕ್ತ ಚಿಕಿತ್ಸೆ ಹಾಗೂ ವೈಧ್ಯರ ಸಲಹೆ ಸೂಚನೆಗಳನ್ನು ಪಡೆದುಕೊಂಡರು.

error: Content is protected !!