ವಗ್ಗ, ಕೆ .ಎಸ್. ಆರ್. ಟಿ ಸಿ. ಬಸ್ ಪಲ್ಟಿ: ಹಲವರಿಗೆ ಗಾಯ:

 

 

ಬಂಟ್ವಾಳ: ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾದ ಘಟನೆ ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಸೆ 23  ಸಂಜೆ ನಡೆದಿದೆ.
ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಚಲಿಸುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ. ಬಸ್ ನಲ್ಲಿ ಪ್ರಯಾಣಿಕರಿದ್ದು ಹಲವರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಹಾಗೂ ಬಸ್ ನಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಿದ್ದಾರೆ. ಅವಘಡಕ್ಕೆ ಬಸ್ ನ ತಾಂತ್ರಿಕ ದೋಷ ಕಾರಣ ಎಂದು ಬಸ್ ನಲ್ಲಿದ್ದವರು ತಿಳಿಸಿದ್ದಾರೆ. ಮಾಹಿತಿ ಪ್ರಕಾರ ಅದೃಷ್ಟವಶಾತ್  ಯಾವುದೇ ಪ್ರಾಣಾ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

error: Content is protected !!