ನಟ ಆರೋಪಿ ದರ್ಶನ್ ವಿರುದ್ಧ ಮತ್ತೊಂದು ಪ್ರಕರಣ: ಬಳ್ಳಾರಿ ಜೈಲಿಗೆ ಬಂದ ಐಟಿ ಅಧಿಕಾರಿಗಳು: ನಗುಮುಖದಲ್ಲೇ ಅಧಿಕಾರಿಗಳನ್ನು ಭೇಟಿಯಾದ ದರ್ಶನ್

ರೇಣುಕಾ ಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿ ಸದ್ಯ ಜಾಮೀನಿನ ನಿರೀಕ್ಷೆಯಲ್ಲಿರುವ ನಟ ಆರೋಪಿ ದರ್ಶನ್ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಐಟಿ ಅಧಿಕಾರಿಗಳು ದರ್ಶನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿ ದರ್ಶನ್ ವಿಚಾರಣೆ ನಡೆಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಬಳಸಿದ ಹಣ, ದರ್ಶನ್‌ರ ಮನೆ ಮಹಜರಿನ ವೇಳೆ ಸಿಕ್ಕ ನಗದು ಇನ್ನಿತರ ವಿಚಾರವಾಗಿ ಐಟಿ ಅಧಿಕಾರಿಗಳು ದರ್ಶನ್ ಅವರ ವಿಚಾರಣೆ ನಡೆಸಲಿದ್ದಾರೆ.

ವಿಚಾರಣೆ ನಡೆಸಲು ಜೈಲಿಗೆ ಬಂದಿದ್ದ ಐಟಿ ಅಧಿಕಾರಿಗಳನ್ನು ದರ್ಶನ್ ನಗುಮುಖದಲ್ಲೆ ಭೇಟಿಯಾಗಿದ್ದಾರೆ.

ಕೊಲೆ ಆರೋಪಲ್ಲಿ ದರ್ಶನ್ ಜಾಮೀನಿಗೆ ಅರ್ಜಿ ಹಾಕಿದ್ದು, ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದೆ. ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

error: Content is protected !!