ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆಗೆ ಶರಣಾಗಿದ ತಂದೆ..!: ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ

ಸಾಂದರ್ಭಿಕ ಚಿತ್ರ

ವದೆಹಲಿ: ನಾಲ್ವರು  ಪುತ್ರಿಯರೊಂದಿಗೆ ತಂದೆ ಆತ್ಮಹತ್ಯೆಗೆ ಶರಣಾಗಿದ ಘಟನೆ ರಂಗಪುರಿ ಗ್ರಾಮದಲ್ಲಿ ಸಂಭವಿಸಿದ್ದು ತಡವಾಗಿ ಬಳೆಕಿಗೆ ಬಂದಿದೆ.

ಬಿಹಾರದ ಛಪ್ರಾ ಜಿಲ್ಲೆಯ ನಿವಾಸಿಯಾಗಿರುವ ಸುಮಾರು 50 ವರ್ಷದ ವಸಂತ್ ಕುಂಜ್ ಎಂಬವರು ತನ್ನ ನಾಲ್ವರು ವಿಕಲಚೇತನ ಹೆಣ್ಣು ಮಕ್ಕಳೊಂದಿಗೆ ತಾವಿದ್ದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಸಂಜೆ ಅವರ ಮಹಡಿಯಿಂದ ದುರ್ವಾಸನೆ ಬರಲು ಪ್ರಾರಂಭಿಸಿದ ನಂತರ, ನೆರೆಹೊರೆಯವರು ಘಟನೆಯ ಬಗ್ಗೆ ಮನೆಯ ಮಾಲೀಕರಿಗೆ ತಿಳಿಸಿದ್ದು, ಬಳಿಕ ಪೊಲೀಸರಿಗೆ ತಿಳಿಸಿದ್ದರು.

ಪೊಲೀಸರು ಮಹಡಿಯ ಬಾಗಿಲು ಒಡೆದು ನೋಡಿದಾಗ ಒಳಗೆ ಐದು ಶವಗಳು ಪತ್ತೆಯಾಗಿವೆ. ಎರಡ್ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಮಕ್ಕಳ ತಾಯಿ ಈಗಾಗಲೇ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದು, ಹೆಣ್ಣು ಮಕ್ಕಳನ್ನು ಪೋಷಿಸಲಾಗದ ಕಾರಣ ತಂದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!