ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು..!: ಮರವೂರು ಫಲ್ಗುಣಿ ನದಿಯಲ್ಲಿ ಘಟನೆ

ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ಮರವೂರು ಫಲ್ಗುಣಿ ನದಿಯಲ್ಲಿ ನೀರುಪಾಲಾದ ಘಟನೆ ಸೆ.29ರಂದು ಸಾಯಂಕಾಲ ಸಂಭವಿಸಿದೆ.

ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿಯ ಫಲ್ಗುಣಿ ನದಿಯಲ್ಲಿ ನಾಲ್ವರು ಯುವಕರು ಭಾನುವಾರ ಸಾಯಂಕಾಲ 4 ಗಂಟೆಗೆ ಈಜಲು ತೆರಳಿದ್ದರು. ಈ ವೇಳೆ ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿಗಳಾದ ಅರುಣ್(19) ಹಾಗೂ ದೀಕ್ಷಿತ್(18) ಈಜಿ ಪಾರಾಗಿದ್ದಾರೆ.

ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿ, ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

error: Content is protected !!