ನಟ ಆರೋಪಿ ದರ್ಶನ್‌ಗೆ ಮತ್ತೆ ನಿರಾಸೆ..!: ಅ. 4ರಂದು ಜಾಮೀನು ಅರ್ಜಿಯ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ಆರೋಪಿ ನಟ ದರ್ಶನ್ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ಜಾಮೀನು ಅರ್ಜಿ ವಿಚಾರಣೆ ದಿನಾಂಕವನ್ನು ಮುಂದೂಡಲಾಗಿದೆ.

ಸೆಪ್ಟೆಂಬರ್ 30ರಂದು ಬೇಲ್ ಸಿಗಬಹುದು ಎಂದು ದರ್ಶನ್ ಆಪ್ತರು ನಿರೀಕ್ಷಿಸಿದ್ದರು. ಆದರೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿದ್ದು ಅಕ್ಟೋಬರ್ 4ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಆದಷ್ಟು ಬೇಗ ದರ್ಶನ್ ಅವರಿಗೆ ಜಾಮೀನು ಸಿಗಲಿ ಅಂತ ಫ್ಯಾನ್ಸ್ ಬಯಸುತ್ತಿದ್ದಾರೆ.

error: Content is protected !!