ಮಂಗಳೂರು: ಅಕ್ರಮ ಮರಳುಗಾರಿಕೆ..!: ಅಧಿಕಾರಿಗಳಿಂದ ದಾಳಿ: 23 ಬೋಟುಗಳು ವಶ

ಮಂಗಳೂರು: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಅ.04ರಂದು ಅಧಿಕಾರಿಗಳು ದಾಳಿ ನಡೆಸಿ 23 ಬೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ತಂಡವು ನೇತ್ರಾವತಿ ನದಿ ತೀರದಲ್ಲಿರುವ ಮಂಗಳೂರಿನ ವಳಚ್ಚಿಲ್, ಬಂಟ್ವಾಳ ತಾಲೂಕಿನ ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಮಾರು ಮೌಲ್ಯ 46 ಲಕ್ಷ ರೂ ಮೌಲ್ಯದ ಬೋಟುಗಳನ್ನು ವಶ್ಕಕೆ ಪಡೆದುಕೊಂಡಿದ್ದಾರೆ.

ಮAಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಹದೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!