ಬೆಂಗಳೂರಿನಲ್ಲಿ ಬಂಧಿತರಾಗಿದ್ದ ಪಾಕಿಸ್ತಾನ ಪ್ರಜೆಗಳು: ವಿಚಾರಣೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು: ಭಾರತ ದೇಶದೊಳಗೆ ಇವರ ಪ್ಲಾನ್ ಏನಾಗಿತ್ತು..?

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾಕಿಸ್ತಾನದಿಂದ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿ ಬಳಿಕ ಬಂಧನಕ್ಕೊಳಗಾಗಿರುವ ಪಾಕಿಸ್ತಾನ ಪ್ರಜೆಗಳ ವಿಚಾರಣೆಯಲ್ಲಿ ಕೆಲವಷ್ಟು ವಿಚಾರಗಳು ಬಯಲಾಗಿದೆ.

ಪೊಲೀಸರು ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ವಿರೋಧಿ ಚಟುವಟಿಕೆಗಳನ್ನು ಮಾಡಲು ಎಲ್ಲಿಂದ ನಿರ್ದೇಶನ ಬರುತ್ತಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

ಲAಡನ್ ನಲ್ಲಿದ್ದ ವ್ಯಕ್ತಿಯೊಬ್ಬ ಸಲಹೆ ಸೂಚನೆಗಳ ಪ್ರಕಾರ ಪಾಕಿಸ್ತಾನ ಪ್ರಜೆಗಳು ಇಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲ ಸೂಫಿ ಪಂಗಡಕ್ಕೆ ಸೇರಿದವರಾಗಿದ್ದು, ಎಲ್ಲರಿಗೂ ಧರ್ಮ ಪ್ರಚಾರ ಮಾಡಲು ಸೂಚನೆ ಬರುತ್ತಿತ್ತು. ಮನೆ ಒಳಗೇ ಇದ್ದುಕೊಂಡು ಧರ್ಮ ಪ್ರಚಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಈವರೆಗೆ 23 ಮಂದಿ ಬಂಧಿತರಾಗಿದ್ದು, ಯಾರೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವಿದಲ್ಲ ಎಂದು ತಿಳಿದು ಬಂದಿದ್ದು ಇವರೆಲ್ಲರನ್ನೂ ಪಾಕಿಸ್ತಾನಕ್ಕೆ ಕಳುಹಿಸಲು ರಾಯಭಾರಿಗೆ ಪತ್ರ ಬರೆಯಲು ಸಿದ್ಧತೆ ನಡೆದಿದೆ.

error: Content is protected !!