ಚಿಕ್ಕಮಗಳೂರು: ಮನೆಮುಂದೆ ವಾಮಾಚಾರ..!:ಭಾರೀ ಆತಂಕಕ್ಕೆ ಒಳಗಾದ ಸ್ಥಳೀಯರು..!

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದಲ್ಲಿ ವಾಮಾಚಾರ ನಡೆಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಇಂದು ಮುಂಜಾನೆ ಸುಮಾರು 5 ಗಂಟೆಗೆ ಹಡೆದಾಳು ಗ್ರಾಮದ ಮೂರೂ ರಸ್ತೆ ಕೂಡುವ ಜಾಗದಲ್ಲಿ ಕಿಡಿಗೇಡಿಗಳ ಗುಂಪು ಬಾಳೆಎಲೆ ಮೇಲೆ ಹಸಿರು ಬಳೆ ಮೇಲೆ ಮಣ್ಣಿನ ಬೊಂಬೆ ಇಟ್ಟು ವಾಮಾಚಾರ ನಡೆಸಿದ್ದಾರೆ.

ಹೆಡದಾಳು ಗ್ರಾಮದ ಚೇತನ್ ಎಂಬುವರ ಮನೆ ಮುಂದೆಯೇ ಬಾಳೆಎಲೆ, ಹಸಿರು ಬಳೆ, ಮಡಕೆಗೆ ಕಾಳಿ ರೂಪ ನೀಡಿ ವಾಮಾಚಾರ ನಡೆದಿದ್ದು ಇದನ್ನು ಈ ಹಳ್ಳಿಯ ಜನರು ಕಂಡಿದ್ದಾರೆ. ಸ್ಥಳದಲ್ಲಿ ಅರಿಶಿನ-ಕುಂಕುಮ, ಕಾಯಿ, ಹಣ್ಣು ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿದೆ.
ಸ್ಥಳೀಯರು ಭಾರೀ ಆತಂಕಕ್ಕೆ ಒಳಗಾಗಿದ್ದಾರೆ.

error: Content is protected !!