ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಹೊಂಡ ಮುಚ್ಚುವ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಈ ವರ್ಷ ಸುರಿದ ಭಾರೀ ಮಳೆಯಿಂದ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣವಾಗಿದ್ದು ಸದ್ಯ ಗುತ್ತಿಗೆದಾರರು ಹೊಂಡ ಮುಚ್ಚುವ ಕಾಮಗಾರಿಯನ್ನು ಪ್ರಾರಂಭಿಸಿದ್ದಾರೆ.

ರಸ್ತೆಯುದ್ದಕ್ಕೂ ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ಅಡೆಚಣೆ ಉಂಟಾಗಿದೆ. ವಾಹನಗಳು ಹೊಂಡಕ್ಕೆ ಬಿದ್ದು ಸಾಗುವಾಗ ಇನ್ನೊಂದು ವಾಹನಕ್ಕೆ ತಾಗಿಕೊಂಡೇ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳು ಕೂಡ ನಿಧಾನ ಗತಿಯಲ್ಲಿ ಸಾಗುವ ಅನಿವಾರ್ಯ ಸೃಷ್ಠಿಯಾಗಿತ್ತು.

ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಬೃಹತ್ ಗುಂಡಿ ಮುಚ್ಚುವ ಕಾಮಗಾರಿಯನ್ನು ಗುತ್ತಿಗೆದಾರರು ಪ್ರಾರಂಭಿಸಿದ್ದಾರೆ.

error: Content is protected !!