ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ: 5 ನೇ ವರ್ಷದ ದೀಪಾವಳಿ ದೋಸೆ ಹಬ್ಬ:  ಪೂರ್ವ ಸಿದ್ಧತಾ ಸಭೆ,ಶಾಸಕ ಹರೀಶ್ ಪೂಂಜ ಭಾಗಿ:

 

 

ಬೆಳ್ತಂಗಡಿ : ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ನಡೆಯುವ 5ನೇ ವರ್ಷದ “ದೀಪಾವಳಿ ದೋಸೆ ಹಬ್ಬ 2024” ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ
ಹಾಗೂ ಯುವಮೋರ್ಚಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

error: Content is protected !!