ಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ವೃದ್ಧೆಯ ಮನವೊಲಿಸಿ ಪ್ರಾಣ ಉಳಿಸಿದ ಪೊಲೀಸರು

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ಪೊಲೀಸರು ರಕ್ಷಿಸಿದ್ದಾರೆ.

ಭದ್ರಾವತಿಯ ಹೊಸ ಸೇತುವೆ ಬಳಿ ವೃದ್ಧೆ ನದಿಗೆ ಬಿದ್ದು ಸಾಯಲು ಯತ್ನಿಸುತ್ತಿದ್ದಾರೆ ಎಂದು  ERSS-122 ಗೆ ದೂರವಾಣಿ ಕರೆ ಬಂದಿತ್ತು. ತಕ್ಷಣ ERSS-122 ಸಿಬ್ಬಂದಿ ಸೇತುವೆ ಬಳಿ ಹೋಗಿ ನೋಡಿದಾಗ ವೃದ್ಧೆ ಮುಳುಗುತ್ತಿದ್ದರು. ಬಳಿಕ ಪೊಲೀಸರು, ಸಾರ್ವಜನಿಕರ ಸಹಾಯದಿಂದ ವೃದ್ಧೆಯನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ವೃದ್ಧೆಯ ಮನವೊಲಿಸಿ ಭದ್ರಾವತಿ ಡಿವೈಎಸ್ಪಿ ಕಚೇರಿಗೆ ಕರೆದುಕೊಂಡು ಹೋಗಲಾಗಿದ್ದು, ಯಾವ ಕಾರಣಕ್ಕೆ ನದಿಗೆ ಬಿದ್ದು ಸಾಯಲು ಯತ್ನಿಸುತ್ತಿದ್ದೀರಿ ಎಂದು ವಿಚಾರಿಸಿದಾಗ ಕೌಟುಂಬಿಕ ಸಮಸ್ಯೆಗಳ ಕಾರಣದಿಂದ ಸಾಯುವ ನಿರ್ಧಾರ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಆ ಬಳಿಕ ಸಂಬAಧಿಕರನ್ನು ಕರೆಸಿ ಮನೆಗೆ ವಾಪಾಸ್ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!