ಧರ್ಮಸ್ಥಳ ಕ್ಷೇತ್ರಕ್ಕೆ ಉದ್ಯಮಿಯಿಂದ ಬೃಹತ್ ಗಂಟೆ ಕಾಣಿಕೆ

ಧರ್ಮಸ್ಥಳ: ಬೆಂಗಳೂರಿನ ಉದ್ಯಮಿಯಾದ ಕೆ.ಎಸ್. ದಿನೇಶ್ ಮತ್ತು ಪತ್ನಿ ಪಿ. ಸುನೀತಾ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಭಕ್ತರಾಗಿದ್ದು, ಸನ್ನಿದಾನಕ್ಕೆ ಬೃಹತ್ ಘಂಟೆಯನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.

ಬೃಹತ್ ಘಂಟೆಯನ್ನು ಫೆ.27ರಂದು ಶಿವರಾತ್ರಿಯ ಶುಭಾವಸರದಲ್ಲಿ ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ನಿರ್ಮಿಸಿದ ನೂತನ ಮಂಟಪದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.

ಬಳಿಕ ದಾನಿಗಳನ್ನು ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು.

error: Content is protected !!