ನವಶಕ್ತಿ ಕ್ರೀಡಾಂಗಣದಲ್ಲಿ ಜನಮನ ಮೆಚ್ಚಿದ “ಛತ್ರಪತಿ ಶಿವಾಜಿ: ಭಗವಾಧ್ವಜ, ಜಯಘೋಷಗಳೊಂದಿಗೆ,ಸಹಸ್ರಾರು ಮಂದಿಯಿಂದ ನಾಟಕ ವೀಕ್ಷಣೆ: ಕಲಾವಿದರನ್ನು ಸನ್ಮಾನಿಸಿ ಗೌರವಿಸಿದ ಗಣ್ಯರು, ನವಶಕ್ತಿ ಕುಟುಂಬಸ್ಥರು:

 

 

 

ಬೆಳ್ತಂಗಡಿ:ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಮಾ 08 ಶನಿವಾರ ನಡೆದ “ಛತ್ರಪತಿ ಶಿವಾಜಿ” ನಾಟಕ ಸಹಸ್ರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ನೇತೃತ್ವದಲ್ಲಿ ತುಳು ರಂಗ ಭೂಮಿಯ ದಿಗ್ಗಜ ವಿಜಯ ಕುಮಾರ್ ಕೊಡಿಯಲ್ ಬೈಲ್ ಸಾರಥ್ಯದ ಕಲಾ ಸಂಗಮ ತಂಡದ ಕಲಾವಿದರಿಂದ “ಛತ್ರಪತಿ ಶಿವಾಜಿ” ಎಂಬ ಐತಿಹಾಸಿಕ ನಾಟಕ ಪ್ರದರ್ಶನಗೊಂಡಿತು.
ಸಹಸ್ರಾರು ಮಂದಿ   ನಾಟಕ ವೀಕ್ಷಿಸಿ.  ಭಗವಾಧ್ವಜ ಹಾರಿಸುತ್ತ ಶಿವಾಜಿಗೆ ಜಯಘೋಷ ಹಾಕಿ ಸಂಭ್ರಮಿಸುತಿದದ್ದು ಎಲ್ಲರ ಗಮನ ಸೆಳೆಯಿತು. ಕೊನೆಯಲ್ಲಿ ವಿಜಯ ಕುಮಾರ್ ಕೊಡಿಯಲ್ ಬೈಲ್ ಸೇರಿದಂತೆ ಕಲಾ ಸಂಗಮ ತಂಡದ ಎಲ್ಲರನ್ನೂ ನವಶಕ್ತಿ ಕುಟುಂಬಸ್ಥರು ಗಣ್ಯರ ಸಮ್ಮುಖದಲ್ಲಿ ಗೌರವಿಸಿದರು. ಈ ವೇಳೆ ಮಾತನಾಡಿದ ವಿಜಯ ಕುಮಾರ್ ಕೊಡಿಯಲ್ ಬೈಲ್, ನಮ್ಮ ಮಾರ್ಗದರ್ಶಕರಾದ  ಉದ್ಯಮಿ ಶಶಿಧರ್ ಶೆಟ್ಟಿಯವರಂತಹ ಕಲಾ ಪೋಷಕರಿಂದಲೇ ಕಲೆಗೆ ಮತ್ತಷ್ಟು ಗೌರವ,ಕಲಾವಿದರಿಗೆ ಉತ್ತಮ ವೇದಿಕೆ ಸಿಗುತ್ತಿದೆ. ನಮ್ಮ ತಂಡದ ಎಲ್ಲರನ್ನೂ ಕಲಾಭಿಮಾನಿಗಳ ಎದುರು ಗೌರವಿಸಿರುವುದು ತಂಡಕ್ಕೆ ಮತ್ತಷ್ಟು ಶಕ್ತಿ ದೊರಕಿದಂತಾಗಿದೆ.ಅವರ  ಕಲಾಪ್ರೀತಿಗೆ, ಅಭಿಮಾನಕ್ಕೆ   ನಾವು ಚಿರಋಣಿಗಳು, ಕಲಾಭಿಮಾನಿಗಳ ಪ್ರೋತ್ಸಾಹ ನಮ್ಮ ತಂಡದ ಮೇಲೆ ಸದಾ ಇರಲಿ  ಎಂದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ,ವಿಶ್ರಾಂತ ಪ್ರಾಂಶುಪಾಲ ಕುಮಾರ ಹೆಗ್ಡೆ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ “ಲಕ್ಷ್ಮೀ ಗ್ರೂಪ್ಸ್” ಉಜಿರೆ, ರಾಜೇಶ್ ಶೆಟ್ಟಿ ನವಶಕ್ತಿ,ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಶಕ್ತಿನಗರ, ಸುಚಿತಾ ರಾಜೇಶ್ ಶೆಟ್ಟಿ ನವಶಕ್ತಿ, ಉಪಸ್ಥಿತರಿದ್ದರು.ಅರವಿಂದ ಕುಮಾರ್ ಲಾಯಿಲ, ಜಗದೀಶ್ ಕನ್ನಾಜೆ ಸಹಕರಿಸಿದರು.

 

 

 

 

 

ಸಾವಿರ ಪ್ರದರ್ಶನ ನೀಡಲಿ:

ವಿಶೇಷ ವಿನ್ಯಾಸದ ಮೂಲಕ  “ಶಿವಧೂತೆ ಗುಳಿಗೆ” ಬಹಬೇಡಿಕೆಯ  ಸೂಪರ್ ಹಿಟ್ ನಾಟಕ 700 ಕ್ಕಿಂತಲೂ ಅಧಿಕ  ಪ್ರದರ್ಶನ ಕಂಡಿದ್ದು, ಇದೀಗ   “ಛತ್ರಪತಿ ಶಿವಾಜಿ” ನಾಟಕ ಕಲಾಭಿಮಾನಿಗಳ ಮನಸ್ಸನ್ನು ಗೆಲ್ಲುವತ್ತ ಹೆಜ್ಜೆ    ಹಾಕುತ್ತಿದೆ. , ವಸ್ತ್ರಾಲಂಕಾರ ರಂಗಾಲಂಕಾರ,, ಲೈಟಿಂಗ್ಸ್, ಹಾಗೂ ಹಿನ್ನೆಲೆ ಗಾಯನ, ಧ್ವನಿ , ನಟನೆ ವಿಭಿನ್ನ ರೀತಿಯಲ್ಲಿ ಮೂಡಿ ಬಂದಿರುವುದು ಕಲಾಭಿಮಾನಿಗಳು ನಾಟಕದ ಬಗ್ಗೆ ಸಂತಸ ವ್ಯಕ್ತಪಡಿಸುವುದರ ಮೂಲಕ ಸಾವಿರಕ್ಕಿಂತಲೂ ಅಧಿಕ ಪ್ರದರ್ಶನ ಕಾಣಲಿ ಎಂದು ಶುಭ ಹಾರೈಸಿದ್ದಾರೆ.

error: Content is protected !!