ಬೆಳ್ತಂಗಡಿ : ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ –ನಾರಾವಿ ರಸ್ತೆಯಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಏ.12 ರಂದು ಮಧ್ಯ ರಾತ್ರಿ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ – ನಾರಾವಿ ರಸ್ತೆಯಲ್ಲಿ ಬೈಕ್ ಸವಾರ ಪ್ರಶಾಂತ್ ತಿರುವು ರಸ್ತೆಯಲ್ಲಿ ನಾರಾವಿಯಿಂದ ವೇಣೂರು ಕಡೆಗೆ ಹೋಗುತ್ತಿರುವ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರ ಪ್ರಶಾಂತ್ ಮತ್ತು ಸಹ ಸವಾರ ದಿನೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.