ಬೆಳ್ತಂಗಡಿ:ತಾಲೂಕು ಆಡಳಿತ, ಬೆಳ್ತಂಗಡಿ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಮಾಲೋಚನಾ ಸಭೆ ಸೋಮವಾರ ಕಿನ್ಯಮ್ಮ ಸಭಾಭವನದಲ್ಲಿ ನಡೆಯಿತು.ಕ್ಷೇತ್ರ ಶಿಕ್ಷಣಾಧಿಕಾರಿಯವರು
ತಾಲೂಕಿನಲ್ಲಿ ಒಟ್ಟು 24 ಶಾಲೆ ಗಳು ಅಸುರಕ್ಷಿತವಾಗಿವೆ ಎಂಬ ಬಗ್ಗೆ ಮಾಹಿತಿ ನೀಡಿದರು.ಈ ವೇಳೆ ಜಿ.ಪಂ ಇಂಜಿನಿಯರ್ ಅವರಲ್ಲಿ ತಕ್ಷಣ ಸಮಸ್ಯೆ ಇರುವ ಶಾಲೆಗಳಿಗೆ ತೆರಳಿ ಕಟ್ಟಡವನ್ನು ಪರಿಶೀಲಿಸಿ ಸುರಕ್ಷಿತವಾಗಿದೆಯೇ ಎಂದು ಪರಿಶೀಲನೆ ನಡೆಸಬೇಕು ಒಂದು ವೇಳೆ ಸುರಕ್ಷಿತವಲ್ಲದಿದ್ದರೆ ಅಲ್ಲಿ ಮಕ್ಕಳಿಗೆ ಪಾಠ ಮಾಡುವುದು ಅಪಾಯವಾಗುತ್ತದೆ. ಎಂದರು.ಅದೇ ಅಪಾಯಕಾರಿಯಾಗಿರುವ ಮರಗಳನ್ನು ತರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಗೆ ಸೂಚಿಸಿದರು.
ಹೆದ್ದಾರಿ ಬದಿಯಲ್ಲಿ ಚರಂಡಿ ಇಲ್ಲದೇ ರಸ್ತೆಯಲ್ಲಿ ನೀರು ಹರಿಯುತ್ತಿದೆ. ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪಿ.ಡಬ್ಲ್ಯೂ ಡಿ ಇಂಜಿನಿಯರ್ ಅವರಿಗೆ ಸೂಚಿಸಿದರು. ಜೆಜೆಎಂ ಕಾಮಗಾರಿ ಸಮರ್ಪಕವಾಗಿ ಆಗಿಲ್ಲ ಎಂದು ವಿವಿಧ ಪಂಚಾಯತ್ ಪಿಡಿಒಗಳು ಸಭೆಯಲ್ಲಿ ತಿಳಿಸಿದಾಗ ಈ ಬಗ್ಗೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಕಛೇರಿ ಹೋಗುವ ಹಾಗೂ ಆಸ್ಪತ್ರೆಗೆ ಹೋಗುವ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡದಂತೆ ಕ್ರಮ ಕೈಗೊಳ್ಳುವಂತೆ ಟ್ರಾಫಿಕ್ ಪೊಲೀಸರಿಗೆ ತಿಳಿಸಿದರು. ಆರೋಗ್ಯ ಇಲಾಖೆ, ಅರಣ್ಯ ಇಲಾಖೆ,ಪೊಲೀಸ್ , ಪಶು ಸಂಗೋಪನಾ , ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಿದರು. ಸಭೆಗೆ ಗೈರು ಹಾಜರಾದ ಕುಕ್ಕೇಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನೋಟಿಸ್ ನೀಡುವಂತೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರಿಗೆ ಸೂಚಿಸಿದರು. ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ.ಯಾವುದೇ ರೀತಿಯ ತೊಂದರೆಯಾದಲ್ಲಿ ತಕ್ಷಣ ಅಧಿಕಾರಿಗಳು ಬೇಕಾದಂತಹ ಕ್ರಮ ಕೈಗೊಂಡು ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸಬೇಕು, ಎಂದರು. ಚಾರ್ಮಾಡಿ ಘಾಟಿಯಲ್ಲಿ ಆಗಾಗ ಗುಡ್ಡ ಕುಸಿತ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಅದಕ್ಕಾಗಿ ತಕ್ಷಣ ಕಾರ್ಯಚರಣೆಗಾಗಿ ಒಂದು ಕ್ರೆನ್ ಮತ್ತು ಜೆಸಿಬಿ ಸಿದ್ದವಾಗಿಟ್ಟುಕೊಳ್ಳುವಂತೆ ಹೆದ್ದಾರಿಯ ಇಂಜಿನಿಯರ್ ಅವರಲ್ಲಿ ತಿಳಿಸಿದರಲ್ಲದೇ ಮೆಸ್ಕಾಂ ಸಂಬಂಧಿಸಿದ ದೂರುಗಳು, ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಲೈನ್ ಮ್ಯಾನ್ ಗಳಿಗೆ ಪೋನ್ ಮಾಡಿದರೆ ಸೌಜನ್ಯದಿಂದ ವರ್ತಿಸಲು ತಿಳಿಸಿ ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಹಶೀಲ್ದಾರ್ ಪ್ರಥ್ವಿಸಾನಿಕಂ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲನಾ ಇಂಜಿನಿಯರ್ ಶಿವಪ್ರಸಾದ್ ಅಜಿಲ ಉಪಸ್ಥಿತರಿದ್ದರು. . ಪೊಲೀಸ್ ಇಲಾಖೆ, ಮೆಸ್ಕಾಂ ಇಲಾಖೆ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ಪಂಚಾಯತ್ ಗಳ ಅಭಿವೃದ್ದಿ ಅಧಿಕಾರಿಗಳು, ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದರು.