ಅರುಣ್ ಪುತ್ತಿಲ ಗಡಿಪಾರು ನೋಟಿಸ್: ಜೂ 06 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ:

 

 

 

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡುವ ಬಗ್ಗೆ ವಿಚಾರಣೆಗಾಗಿ ಜೂನ್ 06 ರಂದು ಹಾಜರಿರುವಂತೆ ಪುತ್ತೂರು ಸಹಾಯಕ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪೊಲೀಸ್ ಕಾಯ್ದೆ ಕಲಂ 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06 ರಂದು ನಿಗದಿಪಡಿಸಿದ್ದು, ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.ವಿಚಾರಣೆಯಲ್ಲಿ ನೀವು ಸ್ವತಃ ಅಥವಾ ನ್ಯಾಯವಾದಿಗಳ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ಒಂದು ವೇಳೆ ಹಾಜರಾಗದೇ ಇದ್ದಲ್ಲಿ ಲಭ್ಯ ಇರುವ ಮಾಹಿತಿ ಪ್ರಕಾರ ಏಕ ಪಕ್ಷೀಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಅವರು ಸೂಚಿಸಿದ್ದಾರೆ.

error: Content is protected !!