ಬೆಂಗಳೂರು:ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಗೆಲುವಿನ ಹಿನ್ನಲೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳೆ, ಮಕ್ಕಳು ಸೇರಿದಂತೆ ಹತ್ತಕ್ಕಿಂತಲೂ ಅಧಿಕ ಮಂದಿ ಕಾಲ್ತುಳಿತಕ್ಕೆ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಮಾರು 15ಕ್ಕಿಂತಲೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್ಸಿಬಿ ತಂಡಕ್ಮೆ ಸರ್ಕಾರದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು , ಚಿನ್ನಸ್ಬಾಮಿ ಕ್ರೀಡಾಂಗಣದ ಬಳಿ ಭಾರೀ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಸೇರಿದ್ದು ಈ ವೇಳೆ ಕಾಲ್ತುಳಿತಕ್ಜೆ 10 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಂಭೀರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.ಅಲ್ಲದೆ, ಸಾವಿನ ಹಾಗೂ ಗಾಯಗೊಂಡಿರುವವರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸಿವೆ.