ಆರ್. ಸಿ.ಬಿ ಸಂಭ್ರಮಾಚರಣೆ ವೇಳೆ ಮಹಾ ದುರಂತ  ಕಾಲ್ತುಳಿತಕ್ಕೆ  11 ಬಲಿ: ಮೃತ ಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ: ಗಾಯಾಳುಗಳಿಗೆ ಉಚಿತ ಚಿಕಿತ್ದೆ:ಸರ್ಕಾರದ ಕಾರ್ಯಕ್ರಮವಲ್ಲ , ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ

 

 

 

ಬೆಂಗಳೂರು: ಐಪಿಎಲ್​ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿದ್ದು

ಸುಮಾರು 11 ಜನ ಸಾವನ್ನಪ್ಪಿದ್ದಾರೆ, 30ಕ್ಕಿಂತಲೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ. ಈ ಬಗ್ಗೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಅನೀರಿಕ್ಷಿತವಾಗಿ ಇಷ್ಟೊಂದು ಜನ ಸೇರುವ ನಿರೀಕ್ಷೆ ಇರಲಿಲ್ಲ , ಲಕ್ಷಾಂತರ ಮಂದಿ ಸೇರಿದ್ದರಿಂದಾಗಿ ಈ ರೀತಿ ನಡೆದಿದೆ. ಇಂತಹ ಘಟನೆ ನಡೆಯಬಾರದಾಗಿತ್ತು, ಮೃತ ಕುಟುಂಬಗಳಿಗೆ ತಲಾ ರೂ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಮ್ಯಾಜಿಸ್ಟ್ರೇಟ್  ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಸೋಶಿಯೇಷನ್ ಕಾರ್ಯಕ್ರಮ ಆಯೋಜನೆ ಮಾಡಿತ್ತು, ಅದಕ್ಕೆ ಸರ್ಕಾರ ಭದ್ರತೆ ನೀಡಿದೆ ಹೊರತು ಅದು ಸರ್ಕಾರದ ಕಾರ್ಯಕ್ರಮ ಅಲ್ಲ ಎಂದು ಸಿದ್ಧರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

error: Content is protected !!