ಬೆಳ್ತಂಗಡಿ,ದೀಪಾ ಗೋಲ್ಡ್ ಮ್ಯಾನೇಜರ್ ಪ್ರಸಾದ್ ಪೈ ಹೃದಯಾಘಾತದಿಂದ ನಿಧನ:

 

 

 

ಬೆಳ್ತಂಗಡಿ: ದೀಪಾ ಗೋಲ್ಡ್ ಬೆಳ್ತಂಗಡಿ ಇಲ್ಲಿನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತಿದ್ದ  ಪಾಣೆಮಂಗಳೂರು ಪ್ರಸಾದ್ ಪೈ ( 50) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ದೀಪಾ ಗೋಲ್ಡ್ ಇಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ಪ್ರಸಾದ್ ಪೈ ಅವರು ಕಳೆದ ವಾರ ಹೃದಯಾಘಾತಕ್ಕೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.  ಅವರು ಪತ್ನಿ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು  ಅಗಲಿದ್ದಾರೆ.

error: Content is protected !!