ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ಗೆ ವಹಿಸಿದ ಹಿನ್ನೆಲೆಯಲ್ಲಿ ಎನ್ಐಎ ತಂಡ ಮಂಗಳೂರಿಗೆ ಆಗಮಿಸಿ ತನಿಖೆಯ ಪ್ರಕ್ರಿಯೆ ಆರಂಭಿಸಿದೆ.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ತನಿಖೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ.
ಎನ್ ಐ ಎ ತಂಡ ಮಂಗಳೂರಿಗೆ ಆಗಮಿಸಿ ಈ ಪ್ರಕರಣದ ತನಿಖಾಧಿಕಾರಿಯಿಂದ ತನಿಖೆಯ ಪ್ರಗತಿ ತಿಳಿದುಕೊಂಡು ತನಿಖೆಯ ಪ್ರಕ್ರಿಯೆ ಆರಂಭಿಸಿದೆ. ಎನ್ ಐ ಎ ಅಧಿಕಾರಿಗಳು ಮಂಗಳೂರಿಗೆ ಬಂದು ತನಿಖೆ ಪ್ರಕ್ರೀಯೆ ಆರಂಭಿಸಿರುವುದನ್ನು ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ದೃಢೀಕರಿಸಿದ್ದಾರೆ.